KANNADA

ಸುಧಾ ವಿ ಉತ್ತರಹಳ್ಳಿಯಲ್ಲಿ ಹೂವಿನ ವ್ಯಾಪಾರಿಯಾಗಿದ್ದು, ಇತ್ತೀಚೆಗಷ್ಟೆ ವ್ಯಾಪಾರಕ್ಕೆ ಪ್ರವೇಶ ಪಡೆದಿದ್ದಾರೆ. ಚಿತ್ರ: ಪ್ರಗತಿ ರವಿ Translated by Madhusudhan Rao ಸುಧಾ ವಿ, ತನ್ನ ಹೂವಿನ ಗಾಡಿಗೆ ತುಂಬಾ ಹತ್ತಿರದಲ್ಲಿ ಓಡಾಡುವ ಹಸುಗಳನ್ನು ಓಡಿಸುತ್ತಾ, ಉತ್ತರಹಳ್ಳಿಯ ಪ್ರಮುಖ ರಸ್ತೆಯೊಂದರಲ್ಲಿ ಬೀದಿವ್ಯಾಪಾರ ಮಾಡುತ್ತಾರೆ. ಮಕರ ಸಂಕ್ರಾಂತಿಯ ದಿನದಂದು ಗ್ರಾಹಕರ ಹೆಚ್ಚಳ ಇದ್ದರೆ, ಮರುದಿನ ಕಥೆಯೇ ಬೇರೆಯಾಗಿತ್ತು. ಹಿಂದಿನ ದಿನ ತಾಜಾತನ ತುಂಬಿದ್ದ ಕೆಂಪು ಗುಲಾಬಿಗಳನ್ನು ಕೇಳುವವರೇ ಇರಲಿಲ್ಲ. ಸಾಲದ್ದಕ್ಕೆ, ಅದೇ ರಸ್ತೆಯ ಬಳಿ ಮಾರಾಟ ಮಾಡುವ ಇತರ ಮೂರು ಹೂಗಾಡಿಗಳ ಜೊತೆ ತೀವ್ರ ಪೈಪೋಟಿ ಎದುರಿಸುತ್ತಾರೆ. ಕೋವಿಡ್ ಪಿಡುಗಿನಿಂದ ಉದ್ಯೋಗಗಳು ನಷ್ಟವಾದಾಗ, ಅನೇಕರು ಅನೌಪಚಾರಿಕ ವಲಯಕ್ಕೆ ತೆರಳಿದ್ದು, ಅದರಲ್ಲಿ ದುಡಿಮೆ ಹೆಚ್ಚು, ಅದು ಮೂಲ ಸಂಪನ್ಮೂಲಗಳ ಮೇಲೆ ಅವಲಂಬಿತ ಮತ್ತು ಪ್ರವೇಶಿಸುವುದು ಸುಲಭ ಅನ್ನುವ ಕಾರಣಕ್ಕೆ. ರಸ್ತೆ ವ್ಯಾಪಾರ, ವಿಶೇಷವಾಗಿ, ನಗರದಲ್ಲಿ ಗಮನಾರ್ಹವಾಗಿ ಹೆಚ್ಚಾಗಿದೆ. ಮನೆ ಕೆಲಸ ಮಾಡುತ್ತಿದ್ದ ಸುಧಾ, ಲಾಕ್‌ಡೌನ್ ನಿಂದ ತಾನು ಕೆಲಸ ಮಾಡುತ್ತಿದ್ದ ಅರ್ಧಕ್ಕಿಂತ ಹೆಚ್ಚು ಮನೆಗಳ…

Read more

Translated by Madhusudhan Rao ವಿಶೇಷ ಮದುವೆ ಕಾಯಿದೆ (ಸ್ಪೆಷಲ್ ಮ್ಯಾರೇಜ್ ಆಕ್ಟ್) 1872 ರ ಬದಲಾಗಿ ಜಾರಿಗೆ ಬಂದ ವಿಶೇಷ ಮದುವೆ ಕಾಯಿದೆ (ಸ್ಪೆಷಲ್ ಮ್ಯಾರೇಜ್ ಆಕ್ಟ್) 1954 ಒಂದು ಪೌರ ಕಾಯ್ದೆಆಗಿದ್ದು, ಇದರಲ್ಲಿ ಜಾತಿ, ಧರ್ಮಗಳನ್ನು ಲೆಕ್ಕಿಸದೆ ವ್ಯಕ್ತಿಗಳ ನಡುವೆ ಮದುವೆಗೆ ಆಸ್ಪದ ಇರುತ್ತದೆ.  ಈ ಕಾಯ್ದೆ ವ್ಯಕ್ತಿಗಳು ತಮ್ಮ ವಿವಾಹವನ್ನು ಯಾವುದೇ ವಿಧಾನದಲ್ಲಿ ಆಚರಿಸಲು ಅನುಮತಿಸುತ್ತದೆ ಮತ್ತು ಈಗಾಗಲೇ ಇತರ ಪ್ರಕಾರದ ವಿವಾಹದಡಿಯಲ್ಲಿ ಮದುವೆಯಾದ ವ್ಯಕ್ತಿಗಳಿಗೆ ತಮ್ಮ ವಿವಾಹವನ್ನು ಕಾಯಿದೆಯಡಿ ನೋಂದಾಯಿಸಲು ಅನುಮತಿ ನೀಡುತ್ತದೆ. ಜನರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡುವ ವಿಷಯದಲ್ಲಿ ಧರ್ಮ ಮತ್ತು ಜಾತಿ ಅಡ್ಡ ಬರದಂತೆ ನೋಡಿಕೊಳ್ಳಲು ಈ ಕಾನೂನು ಜಾರಿಗೆ ತರಲಾಯಿತು. ವಾಸ್ತವವಾಗಿ, ಈ ಕಾಯಿದೆಯಡಿ ವಿವಾಹ ಸಮಂಜಸ ಎನಿಸಿಕೊಳಲು ಮುಖ್ಯವಾಗಿ ಅಗತ್ಯವಿರುವುದೆಂದರೆ, ಸಂಬಂಧಪಟ್ಟ ಎರಡೂ ವ್ಯಕ್ತಿಗಳು ತಮ್ಮ ಧಾರ್ಮಿಕ ನಂಬಿಕೆಗಳು ಅಥವಾ ಜಾತಿಯನ್ನು ಲೆಕ್ಕಿಸದೆ ಮದುವೆಗೆ ಒಪ್ಪಿಗೆ ನೀಡುವುದು. ಈ ಕಾಯಿದೆಯಡಿ, ವಿವಾಹ ಮಾನ್ಯ ಎನಿಸಿಕೊಳ್ಳಲು ಮೂಲಭೂತ ಅವಶ್ಯಕತೆಗಳು ಇತರ…

Read more

ಬೆಂಗಳೂರಿನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದರ ಹಿಂದೆಯೇ ಕೇಳಿಬಂದ ಬಹುಮುಖ್ಯ ದೂರು ಆಸ್ಪತ್ರೆಗಳ ಹಾಸಿಗೆ ಕೊರತೆ ಮತ್ತು ಚಿಕಿತ್ಸೆ ನಿರಾಕರಣೆ. ಇತ್ತೀಚೆಗೆ ರಾಮನಗರ ಜಿಲ್ಲೆಯ ಚಿಕ್ಕಮುದವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿದ್ದ ವೈದ್ಯ ಡಾ. ಮಂಜುನಾಥ್ ಎಸ್.ಟಿ.  ಚಿಕಿತ್ಸೆ ದೊರೆಯದೆ ಕೊನೆಯುಸಿರೆಳೆದರು. ಬೆಂಗಳೂರಿನ ಮೂರು ಆಸ್ಪತ್ರೆಗಳು ಅವರನ್ನು ಒಳರೋಗಿಯಾಗಿ ದಾಖಲಿಸಿಕೊಳ್ಳಲು ನಿರಾಕರಿಸಿ ಹಿಂದಕ್ಕೆ ಕಳುಹಿಸಿದ್ದವು. ಇಷ್ಟೆಲ್ಲಾ ಆದ ಮೇಲೂ ಸರ್ಕಾರ ಮಾತ್ರ ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಹಾಸಿಗೆಗಳು ಲಭ್ಯವಿವೆ ಎಂದು ಹೇಳುತ್ತಲೇ ಬಂದಿದೆ. ಜೂನ್ ತಿಂಗಳ ಕೊನೆಯಲ್ಲಿ ಸರ್ಕಾರ ಒಂದು ಆದೇಶ ಹೊರಡಿಸಿ ಖಾಸಗಿ ಆಸ್ಪತ್ರೆಗಳು ತಮ್ಮ ಸಾಮರ್ಥ್ಯದ ಅರ್ಧದಷ್ಟು ಹಾಸಿಗೆಗಳನ್ನು ಕೋವಿಡ್ ರೋಗಿಗಳಿಗಾಗಿ ಮೀಸಲಿಡಬೇಕು ಎಂದು ಹೇಳಿತು. ಜುಲೈ 7ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗಾಗಿ ಮೀಸಲಿಟ್ಟಿರುವ ಹಾಸಿಗೆಗಳಲ್ಲಿ ಶೇಕಡಾ 78ರಷ್ಟು ಖಾಲಿ ಇವೆ ಎಂದರು. ಆಗಸ್ಟ್ 4ರಂದು ಈ ಲೇಖಕ  ಬಿಬಿಎಂಪಿಯ ಹಾಸಿಗೆ ಲಭ್ಯತೆಯ ಆಯಾ ಕ್ಷಣದ…

Read more

Translated by Madhusudhan Rao ಜೂನ್ 28 ರಿಂದ ಜುಲೈ 5 ರ ನಡುವಿನ ವಾರದಲ್ಲಿ, ಬೆಂಗಳೂರಿನ ಕೋವಿಡ್-19 ಎಣಿಕೆ 7240 ಹೊಸ ಪ್ರಕರಣಗಳೊಂದಿಗೆ ಮೂರು ಪಟ್ಟು ಹೆಚ್ಚಾಗಿದೆ. ಪ್ರಕರಣಗಳ ಪ್ರವಾಹ ನಗರದ ಆರೋಗ್ಯ ವ್ಯವಸ್ಥೆಯ ಮೇಲೆ ದೊಡ್ಡ ಹೊರೆಯಾಗಿದ್ದು, ಅಸ್ವಸ್ಥರು ಆಸ್ಪತ್ರೆಯ ಹಾಸಿಗೆಗಳನ್ನು ಅಥವಾ ಚಿಕಿತ್ಸೆಯನ್ನು ಸಮಯಕ್ಕೆ ಸರಿಯಾಗಿ ಪಡೆಯದಿರುವ ಬಗ್ಗೆ ಅನೇಕ ವರದಿಗಳು ಬಂದಿವೆ. ಆದ್ದರಿಂದ ಕೋವಿಡ್-ಪಾಸಿಟಿವ್ ಆದರೆ ಬೆಂಗಳೂರಿಗರು ಏನು ಮಾಡಬೇಕು ಎಂಬ ಬಗ್ಗೆ ಭಯ ಮತ್ತು ಗೊಂದಲ ಉಂಟಾಗಿದೆ. “ಕೋವಿಡ್ ಗಿಂತ ಅದರ ಬಗ್ಗೆ ಭಯ-ಭೀತಿಯೇ ಹೆಚ್ಚು ಅಪಾಯಕಾರಿ. ಎಲ್ಲಕ್ಕಿಂತ ಮುಂಚೆ ನಾವು ಇದರ ಬಗ್ಗೆ ಗಮನ ಕೊಡಬೇಕು” ಎಂದು ಭಾರತೀಯ ಸಾರ್ವಜನಿಕ ಆರೋಗ್ಯ ಸಂಸ್ಥೆಯ (ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್) ಸಾಂಕ್ರಾಮಿಕ ರೋಗಶಾಸ್ತ್ರ ವಿಭಾಗದ ಮುಖ್ಯಸ್ಥರೂ, ಪ್ರಾಧ್ಯಾಪಕರೂ ಆದ ಡಾ.ಗಿರಿಧರ ಆರ್ ಬಾಬು ಹೇಳುತ್ತಾರೆ. ಡಾ.ಗಿರಿಧರ್ ಅವರು ರಾಜ್ಯ ಸರ್ಕಾರದ ಕೋವಿಡ್ ತಜ್ಞರ ಸಮಿತಿ ಮತ್ತು ಐಸಿಎಂಆರ್ ನ ಕೋವಿಡ್ ಕಾರ್ಯಪಡೆಗಳ ಸದಸ್ಯರಾಗಿದ್ದಾರೆ.…

Read more

Translated by Mukund Gowda ಅನೇಕ ವರ್ಷಗಳಿಂದ ಸಿಲ್ಕ್ ಬೋರ್ಡ್ ಮತ್ತು ಕೆ.ಆರ್.ಪುರಂ ಮಧ್ಯೆ ಬಿಎಂಟಿಸಿ ಬಸ್ ಚಾಲನೆ ಮಾಡುತ್ತಿರುವ ರಾಮು ಬಿ.ಪಿ ಅವರಿಗೆ ಕಳೆದ ನವೆಂಬರ್ 1 ರಿಂದ ಜಾರಿಯಾದ ಬಸ್ ಆದ್ಯತೆ ಪಥ ನಿರಾಳತೆ ನೀಡಿದೆ. "ಮೊದಲೆಲ್ಲಾ ಈ ಮಾರ್ಗ ಮಧ್ಯದ ಸಂಚಾರಕ್ಕೆ 75 ನಿಮಿಷ ಬೇಕಿತ್ತು , ಕಳೆದ ಮೂರು ತಿಂಗಳಲ್ಲಿ ಇದು 45-50 ನಿಮಿಷಕ್ಕೆ ಇಳಿದಿದೆ." ಎಂದು ಹೇಳುವ ಇವರು "ಬಸ್ ಆದ್ಯತೆ ಪಥ ಸಂಪೂರ್ಣವಾಗಿ ಜಾರಿಯಾದರೆ,‌ ಇನ್ನಷ್ಟು ಸಮಯ ಉಳಿಯುವುದು" ಎಂದು ಅಭಿಪ್ರಾಯ ಪಟ್ಟಿದ್ದಾರೆ.  ಇದೇ ಮಾರ್ಗದಲ್ಲಿ ಬಸ್ ಚಲಾಯಿಸುವ ಇನ್ನೊಬ್ಬ ಚಾಲಕ ಸಂಜಪ್ಪ ಅವರಿಗೆ ಬಸ್ ಆದ್ಯತೆ ಪಥ ಮಾನಸಿಕ ನೆಮ್ಮದಿ ನೀಡಿದೆ. "ಮೊದಲೆಲ್ಲಾ ಜನರು ಬೇಜವಾಬ್ದಾರಿಯಿಂದ  ಅಪಾಯಕಾರಿಯಾಗಿ ವಾಹನ‌ ಓಡಿಸುವುದರಿಂದ ಹೆಚ್ಚು ಒತ್ತಡ ಇತ್ತು, ಇದೀಗ ನಮಗೆಂದೇ ಪ್ರತ್ಯೇಕ ಪಥ ಇರುವುದರಿಂದ ಬಸ್ ಚಲಾಯಿಸುವುದು ಸುಲಭವಾಗಿದೆ" ಎನ್ನುತ್ತಾರೆ. ಸಾರ್ವಜನಿಕ ಸಾರಿಗೆಗೆ ಪ್ರತ್ಯೇಕ ಪಥ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಎಲ್ಲಾ ವಾಹನ ಸವಾರರು…

Read more

Translated by Madhusudhan Rao ಬೆಂಗಳೂರಿನಲ್ಲಿ ಎಲ್ಲರೂ ರಸ್ತೆಗಳಲ್ಲಿನ ಕಸದ ರಾಶಿಯನ್ನು ನೋಡಿ ಅಸಹ್ಯಿಸಿಕೊಳ್ಳುವವರೇ. ಬಿಬಿಎಂಪಿ ತ್ಯಾಜ್ಯವನ್ನು ವಿಲೇವಾರಿ ಮಾಡಿದ ನಂತರ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಆದರೆ ಕಸ ಎಲ್ಲಿಗೆ ಹೋಗುತ್ತದೆ? ಸರ್ಕಾರ ಬೆಂಗಳೂರಿನ ಕಸದ ದುಃಸ್ಥಿತಿ ಸರಿಪಡಿಸಲು ಒಂದು ಧಿಡೀರ್ ಪರಿಹಾರ ಸೂಚಿಸಿದೆ - ದಿನಕ್ಕೆ ಒಟ್ಟು 2100 ಟನ್ ತ್ಯಾಜ್ಯವನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರುವ ಐದು ಕಸದಿಂದ ವಿದ್ಯುತ್ ತಯಾರಿಸುವ (“ವೇಸ್ಟ್-ಟು-ಎನರ್ಜಿ” ಅಥವಾ ಡಬ್ಲ್ಯೂಟಿಈ / WtE) ಘಟಕಗಳು. ಅನೇಕರು ಅಂದುಕೊಳ್ಳಬಹುದು - ವಾಹ್, ಕಸದಿಂದ ವಿದ್ಯುತ್! ಎಂಥ ಅದ್ಭುತ ಪರಿಕಲ್ಪನೆ! ಒಂದೇ ಏಟಿಗೆ ಎರಡು ಹಕ್ಕಿ ಹೊಡೆದ ಹಾಗೆ! ಆದರೆ ಇದು ಖಂಡಿತ ತಪ್ಪು. ಇದಕ್ಕೆ ಐದು ಕಾರಣಗಳು ಇಲ್ಲಿವೆ: ಭಾರತದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯಕ್ಕೆ ಡಬ್ಲ್ಯುಟಿಈ ಘಟಕಗಳು ಸೂಕ್ತವಲ್ಲ “ಆದ್ರೆ ಸ್ವೀಡನ್, ಸಿಂಗಪುರ್ ಮತ್ತು ಜಪಾನ್ ಗಳಲ್ಲಿರುವ ಡಬ್ಲ್ಯುಟಿಈ ಘಟಕಗಳನ್ನು ವಾಟ್ಸಾಪ್ಪ್ ವಿಡಿಯೋನಲ್ಲಿ ನಾನು ನೋಡಿದೀನಿ - ಈ ದೇಶಗಳಂತೆಯೇ ಆಧುನಿಕ ತಂತ್ರಜ್ಞಾನವನ್ನು ನಾವೂ ಏಕೆ…

Read more

Translated by Purushothama Nag ಎರಡು ಪ್ರಸ್ತಾಪಗಳು - ಉದ್ದವಾದ ಪಾದಚಾರಿ ಮಾರ್ಗಗಳು ಮತ್ತು ವಾರದ ಕೆಲವು ದಿನಗಳಲ್ಲಿ ಪಾದಚಾರಿ ಮೀಸಲು ರಸ್ತೆಗಳು ಬೆಂಗಳೂರು ಮಹಾನಗರ ಪ್ರದೇಶಕ್ಕಾಗಿ ಸಮಗ್ರ ಚಲನಶೀಲತೆ ಯೋಜನೆಯ (ಸಿಎಂಪಿ) ಇತ್ತೀಚಿನ ಕರಡು ಅದರ ನಾಲ್ಕು ವರ್ಷದ ಹಿಂದಿನ ಆವೃತ್ತಿಗಿಂತ ಗಮನಾರ್ಹವಾಗಿ ಭಿನ್ನವಾಗಿದೆ. ನಗರದ ಸಂಚಾರ ಅವ್ಯವಸ್ಥೆಯನ್ನು ಸರಿಪಡಿಸಲು ಅಲ್ಪ ಮತ್ತು ದೀರ್ಘಕಾಲೀನ ಯೋಜನೆಗಳನ್ನು ರೂಪಿಸಲು ಸಿಎಂಪಿ ಸಿದ್ಧಪಡಿಸಲಾಗಿದೆ. ಸಮಗ್ರ ಸಾರಿಗೆ ಯೋಜನೆ 2019 ರ ಸಂಪೂರ್ಣ ಸಾರಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ ಆದರೆ ಮೋಟಾರುರಹಿತ ಸಾರಿಗೆ, ಅವುಗಳೆಂದರೆ ಪಾದಚಾರಿಗಳು ಮತ್ತು ಸೈಕಲ್ ಸವಾರರ ಬಗ್ಗೆ ಕಡಿಮೆ ಅಥವಾ ಗಮನ ಹರಿಸದ ಹಿಂದಿನ ಪ್ರಸ್ತಾಪಗಳಿಗಿಂತ ಭಿನ್ನವಾಗಿ, ಹೊಸ ಕರಡು ಸಿಎಂಪಿ ಪಾದಚಾರಿ ಮತ್ತು ಸೈಕ್ಲಿಂಗ್ ಮೂಲಸೌಕರ್ಯಗಳನ್ನು ನಿಗದಿಸಿದೆ. ಇದು ಸಮಗ್ರ ಯೋಜನೆಗೆ ಪೂರಕವಾಗಿದೆಯೇ ಮತ್ತು ಈ ಸೌಲಭ್ಯಗಳು ಸಾಕೆ ಎನ್ನುವುದು ಇನ್ನೂ ಚರ್ಚಿಸಬೇಕಾಗಿದೆ.  ಪ್ರಸ್ತಾಪಗಳು ಹೀಗಿವೆ: ಎತ್ತರದ ಪಾದಚಾರಿ ಸೇತುವೆಗಳು  ಸಿಎಂಪಿ ತನ್ನ ಮಲ್ಟಿ-ಮೋಡಲ್ ಮೊಬಿಲಿಟಿ ಯೋಜನೆಯಡಿ, 300…

Read more

Translated by Mukund Gowda ನಗರ ಭೂ ಸಾರಿಗೆ ನಿರ್ದೇಶನಾಲಯವು ಇತ್ತೀಚಿಗೆ ಬೆಂಗಳೂರು ಮಹಾನಗರದ  'ಸಮಗ್ರ ಸಾರಿಗೆ ಯೋಜನೆಯ  ಕರಡನ್ನು ತಯಾರಿಸಿದ್ದು ಇದರಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಎಲಿವೇಟೆಡ್ ಕಾರಿಡಾರ್ ಯೋಜನೆಯೂ ಒಳಗೊಂಡಿದ್ದು ೯೨ ಕಿಲೋಮೀಟರ್ ನ ಈ ಎತ್ತರದ ಕಾರಿಡಾರ್ ನಿರ್ಮಾಣಕ್ಕೆ ಹದಿನೆಂಟು ಸಾವಿರ ಕೋಟಿಗೂ ಹೆಚ್ಚು ವ್ಯಯಿಸಲಾಗುವುದು  ಎಂದು  ಉಲ್ಲೇಖಿಸಿದೆ.  ಕೇಂದ್ರದ ಮೆಟ್ರೋ ಪೋಲಿಸಿಗೆ ಅನುಗುಣವಾಗಿ ಮೆಟ್ರೋಪಾಲಿಟನ್ ನಗರಕ್ಕೆ 'ಸಮಗ್ರ ಸಾರಿಗೆ ಯೋಜನೆ'ಯನ್ನು ತಯಾರಿಸಬೇಕಿದೆ.  ಈ ಯೋಜನೆಯ ಕರಡಿನಲ್ಲಿ ಏನೆಲ್ಲಾ ಇದೆ ಎಂದು ಇಲ್ಲಿ ಸಂಕ್ಷಿಪ್ತವಾಗಿ ಹೇಳುತ್ತೇವೆ :  ಮೆಟ್ರೋ, ಉಪನಗರ ರೈಲು, ಬಸ್ ಆದ್ಯತಾ ಪಥ ಮತ್ತು ಬಸ್ ಸಂಖ್ಯೆ ಹೆಚ್ಚಳವನ್ನು ಒಳಗೊಂಡಂತೆ  ಮೂರು ಹಂತದಲ್ಲಿ ಸಮಗ್ರ ಸಾರಿಗೆ ವ್ಯವಸ್ಥೆ ಕಲ್ಪಿಸುವ ಯೋಜನೆಗಳು ಈ ಹಿಂದೆ 2011 ಮತ್ತು 2015ರ ಕರಡು ಯೋಜನೆಯಲ್ಲಿ ಪ್ರಸ್ತಾಪಿತವಾಗಿತ್ತು.  ಈ ಯೋಜನೆಯ ಹಳೆ ಮತ್ತು ಹೊಸ ಆವೃತ್ತಿಗಳ ಎರಡನೇ ಮತ್ತು ಮೂರನೇ ಹಂತದಲ್ಲಿ ನಗರ ಸಾರಿಗೆಯ ವಿವಿಧ ಆಯಾಮಗಳ ಬಗ್ಗೆ ಪ್ರಸ್ತಾಪಿಸಲಾಗಿದೆ.…

Read more

Translated by Madhusudhan Rao and Pavan ಅಕ್ಟೋಬರ್ 4 ರಂದು, 33 ವರ್ಷ ವಯಸ್ಸಿನ ಐಟಿ ಉದ್ಯೋಗಿ ವ್ಯಾಸ್ ರವರ (ಹೆಸರು ಬದಲಾಯಿಸಿದೆ) ಸ್ಕೂಟರ್ ಗುಂಡಿಯೊಳಕ್ಕೆ ಬಿದ್ದು, ಮೊಣಕಾಲು  ಮುರಿದುಕೊಳ್ಳಬೇಕಾಯಿತು. ನಂತರ ನಡೆದ ಶಸ್ತ್ರ ಚಿಕಿತ್ಸೆ, ಆಸ್ಪತ್ರೆ ಖರ್ಚು, ಫಿಸಿಯೋಥೆರಪಿ, ಔಷಧಿ ವೆಚ್ಚ, ಗಾಡಿ ರಿಪೇರಿ ಖರ್ಚು ಇವೆಲ್ಲ ರೂ.4,34,323 ಕ್ಕಿಂತ ಹೆಚ್ಚು. ಆತ ಈಗಲೂ ಹಾಸಿಗೆ ಬಿಟ್ಟಿಲ್ಲ. ವ್ಯಾಸ್ ಪರಿಹಾರದ ಭರವಸೆಯಲ್ಲಿ ಒಂದಾದಮೇಲೊಂದು ಸರ್ಕಾರಿ ಇಲಾಖೆಗಳಿಗೆ ಇಮೇಲ್ ಕಳುಹಿಸುತ್ತಲೇ ಇದ್ದಾರೆ. ಆದ್ರೆ ಜವಾಬು ಮಾತ್ರ ಬಂದಿಲ್ಲ. ಕಾರಣ? ಬಹಳಷ್ಟು ಸಂಖ್ಯೆಯಲ್ಲಿ  ರಸ್ತೆಗುಂಡಿ ಸಂತ್ರಸ್ತರಿದ್ದರೂ, ಬಿ.ಬಿ.ಎಂ.ಪಿ ಅವರಿಗೆ ಪರಿಹಾರ ಒದಗಿಸುವ ವ್ಯವಸ್ಥಿತ ಕಾರ್ಯಸೂಚಿ ಕಲ್ಪಿಸದೆ ಇಲ್ಲದಿರುವುದು ರಸ್ತೆಗುಂಡಿ ಅಪಘಾತ ಸಂತ್ರಸ್ತರಿಗೆ ತಲೆನೋವಾಗಿ ಪರಿಣಮಿಸಿದೆ.   ಇಲ್ಲಿವರೆಗೂ ಪರಿಹಾರ ಕೇವಲ ಮಹಾಪೌರರ ‘ವಿವೇಚನೆ'ಯ ಮೇರೆಗೆ ಮಾತ್ರ ಸೀಮಿತವಾಗಿದೆ. ಅಲ್ಲದೆ, ಎಷ್ಟು ಜನ ಸಂತ್ರಸ್ತರಿಗೆ ಈಗಿನವರೆಗಿನ ಮಹಾಪೌರರು ಪರಿಹಾರ ಒದಗಿಸಿದ್ದಾರೆ ಅನ್ನುವುದರ ಮಾಹಿತಿ ಕೂಡ ಇಲ್ಲ. ಈ ವರ್ಷ ಜೂಲೈ ನಲ್ಲಿ, ಕರ್ನಾಟಕದ…

Read more